ತೆಕ್ಕಾರು: ಇಂದು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೇವರ ಬಿಂಬ ಪ್ರತಿಷ್ಠೆ, ಪ್ರಾಣ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಅದ್ಧೂರಿಯಾಗಿ ಜರಗಿತು.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಪುಣ್ಯಕರ್ಮದಲ್ಲಿ ಪಾಲ್ಗೊಂಡರು.
ಈ ಪುಣ್ಯಸಂಧರ್ಭದಲ್ಲಿ ಶ್ರೀ ಕಿಶೋರ್ ಕುಮಾರ್ ಕೊಟ್ಯಾಡಿ ಅವರು ಹಾಗೂ ಇತರ ಗಣ್ಯ ವ್ಯಕ್ತಿಗಳು ಭಾಗವಹಿಸಿ ದೇವರ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು.