ಬಂಟ್ವಾಳ: ದ. ಕ ಜಿಲ್ಲೆಯ ಬಂಟ್ವಾಳ ಬಿಜೆಪಿ ಮಂಡಲದ ಆಶ್ರಯದಲ್ಲಿ, ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ರಾಯಿ ಗ್ರಾಮ ಪಂಚಾಯತ್ ಕಚೇರಿಯ ಮುಂದೆ ಭಾರೀ ಪ್ರತಿಭಟನೆ ನಡೆಯಿತು.
ಈ ಪ್ರತಿಭಟನೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ನೇತೃತ್ವ ವಹಿಸಿ ಮಾತನಾಡಿದ ಅವರು ಸರ್ಕಾರದ ಜನಪರ ಪ್ರಭುತ್ವವಿಲ್ಲದ ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದರು. "ಪ್ರಜೆಗಳ ಹಿತದ ಪರವಾಗಿ ನಡೆಯಬೇಕಾದ ಸರ್ಕಾರ ಇಂದು ಹಿತಾಸಕ್ತ ಗುಂಪುಗಳಿಗೆ ಮಣೆಹಾಸುತ್ತಿದೆ" ಎಂದು ಆರೋಪಿಸಿದರು.
ಈ ಪ್ರತಿಭಟನೆಯಲ್ಲಿ ಹಲವು ಪ್ರಮುಖ ಮುಖಂಡರು ಪಾಲ್ಗೊಂಡಿದ್ದರು.
ಮಾಜಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ರಾಯಿ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷ ಗುಣವತಿ ಪೂಜಾರಿ, ಮಾಜಿ ಕಾರ್ಯದರ್ಶಿ ರಮನಾಥ ರಾಯಿ, ಧಮೋಧ್ಧಾನ ಪ್ರತಿಷ್ಠಾನ ವೇದಿಕೆ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು, ಅಸಂಘಟಿತ ಕಾರ್ಮಿಕರ ಒಕ್ಕೂಟದ ಸಹಸಂಚಾಲಕ ಹರೀಶ್ ರಾಯಿ, ಪ್ರಕೋಷ್ಠಗಳ ಸಂಚಾಲಕರಾದ ಚಂದ್ರಶೇಖರ ಗೌಡ ಕಾರಂಬಡೆ, ಸಂತೋಷ್ ಅಂಚನ್, ಆನಂದ ಬುರಾಲ್, ಜಯಂತ್ ಸಪಲ್ಯ, ಸದಸ್ಯ ರವೀಂದ್ರ ಪೂಜಾರಿ ಬದನಾಡಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಶಕ್ತಿಕೇಂದ್ರ ಸಂಚಾಲಕರು, ಬೂತ್ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ಹಿರಿಯ ಕಾರ್ಯಕರ್ತರು ಹಾಗೂ ರಾಯಿ ಗ್ರಾಮದ ಜನಸಾಮಾನ್ಯರು ಸಹ ಹೆಚ್ಚಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಸ್ವಾಗತಿಸಿ, ವಂದಿಸಿದರು.