ಮಂಗಳೂರು: ಬಜಾಲ್ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ನೇತೃತ್ವದಲ್ಲಿ 24 ನವೆಂಬರ್ 2024ರಂದು "ಹಿಂದೂ ರಾಷ್ಟ್ರ-ಜಾಗೃತಿ ಸಭೆ" ಯಶಸ್ವಿಯಾಗಿ ನಡೆಯಿತು. ದೇಶದ ಇತಿಹಾಸದಲ್ಲಿ ಮುಘಲರು, ಬ್ರಿಟಿಷರು ಮತ್ತು ಪೋರ್ಚುಗೀಸರು ಹಿಂದೂ ಧರ್ಮವನ್ನು ನಾಶ ಮಾಡಲು ಯತ್ನಿಸುತ್ತಿದ್ದರು.ಈಗ ವಕ್ಫ್ ಕಾಯ್ದೆ, ಲವ್ ಜಿಹಾದ್ ನಂತಹ ಸಮಸ್ಯೆಗಳಿಂದ ಹಿಂದೂಗಳು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ *ಧರ್ಮ ಉಳಿದರೆ ರಾಷ್ಟ್ರ ಉಳಿಯುವುದು, ರಾಷ್ಟ್ರ ಉಳಿದರೆ ನಾವು ಬದುಕಿರಲು ಸಾಧ್ಯ ಇದನ್ನು ಅರಿತುಕೊಳ್ಳುವ ಅವಶ್ಯಕತೆ ಇದೆ*. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಹಿಂದೂ ರಾಷ್ಟ್ರವನ್ನು ನಮಗೆ ಯಾರೂ ಉಡುಗೊರೆಯಾಗಿ ಕೊಡುವುದಿಲ್ಲ. ಇದಕ್ಕಾಗಿ ಸಂಘರ್ಷ ಮಾಡಬೇಕಾಗುತ್ತದೆ. ಛತ್ರಪತಿ ಶಿವಾಜಿ ಮಹಾರಾಜರು ಸರ್ವಸ್ವವನ್ನು ತ್ಯಾಗ ಮಾಡಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ಬಹುಸಂಖ್ಯಾತ ಇರುವ ಹಿಂದೂಗಳು ಶಿವಾಜಿಯವರನ್ನು ಆದರ್ಶ ಇಟ್ಟುಕೊಂಡು ಪ್ರತಿದಿನ ಒಂದು ಗಂಟೆಯಾದರೂ ರಾಷ್ಟ್ರ ಮತ್ತು ಧರ್ಮಕ್ಕಾಗಿ ತನು, ಮನ, ಧನದ ತ್ಯಾಗ ಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ಡಾ. ಪ್ರಣವ್ ಮಲ್ಯ ಇವರು ಕರೆ ನೀಡಿದರು. ಸುಮಾರು 250ಕ್ಕೂ ಹೆಚ್ಚು ಹಿಂದೂ ಬಂದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಹಿಂದೂ ಯುವ ಸೇನೆ ಮತ್ತು ಹಿಂದೂ ಸೇವಾ ಸಮಿತಿಯ ಕಾರ್ಯಕರ್ತರು, ಕಾವು ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀ. ರಾಮಚಂದ್ರ ಆಳ್ವಾ, ಮಾಜಿ ಅಧ್ಯಕ್ಷರಾದ ಕಿರಣ್ ರೈ, ಸೂರ್ಯ ನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಗಣೇಶ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ ಮತ್ತು ವೀಣಾ ಮಂಗಲ ಇವರು ಉಪಸ್ಥಿತರಿದ್ದರು.ಹಿಂದೂ ಜನಜಾಗೃತಿ ಸಮಿತಿಯ ಪರಿಚಯವನ್ನು ಶ್ರೀ. ವಿವೇಕ್ ಪೈ ಮಾಡಿ ಸಮಿತಿಯ ಅವಿರತ ಪ್ರಯತ್ನಕ್ಕೆ ಸಿಕ್ಕಿದ ಯಶಸ್ಸನ್ನು ಹೇಳಿದರು. ಸನಾತನ ಧರ್ಮ ಅನಾದಿಕಾಲದಿಂದ ಇದೆ. ವೇದಕಾಲದಿಂದ ಜಾತಿಯ ವರ್ಣನೆ ಇಲ್ಲ, ಹಿಂದೂ ಧರ್ಮದಲ್ಲಿ ಯಾವುದೇ ಜಾತಿಯವರಿದ್ದರೂ ಅವರು ಸನಾತನಿಯರು. ಜಾತಿಯ ಹೆಸರಿನಲ್ಲಿ ಬೇರೆ ಆಗುವ ಬದಲು ಹಿಂದೂ ಧರ್ಮದ ಅಡಿಯಲ್ಲಿ ಸಂಘಟಿರಾಗಿ ಧರ್ಮಾಚರಣೆಯನ್ನು ಮಾಡಬೇಕು ಮತ್ತು ಧರ್ಮದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಬೇಕು. ಹಿಂದೂ ರಾಷ್ಟ್ರ ಸಾಕಾರಗೊಳಿಸಲು ಹಿಂದೂ ಬಾಂಧವರಿಗೆ ಸಂಘಟಿತರಾಗಲು ಆಧ್ಯಾತ್ಮಿಕ ಪ್ರಚನಕಾರರಾದ ಉಡುಪಿಯ ಶ್ರೀ. ನಟರಾಜ ಭಟ್ ಅವರು ಕರೆ ನೀಡಿದರು.
ಸೌ. ಲಕ್ಷ್ಮಿ ಪೈಯವರು ತಮ್ಮ ಪ್ರವಚನದಲ್ಲಿ ಸನಾತನ ಧರ್ಮದ ವೈಜ್ಞಾನಿಕತೆಯ ಬಗ್ಗೆ ಹಾಗೂ ಶ್ರೇಷ್ಠತ್ವದ ಬಗ್ಗೆ ವಿವರಿಸಿ ಹೇಳಿದರು. ಹಿಂದೂ ಧರ್ಮದಲ್ಲಿ ಹೇಳಲಾದ ಪ್ರತಿಯೊಂದು ಆಚರಣೆಗಳ ಹಿಂದೆ ವಿಜ್ಞಾನವಿದೆ, ಅಧ್ಯಾತ್ಮವಿದೆ ಮತ್ತು ಈಶ್ವರನ ಅಧಿಷ್ಠಾನವಿದೆ, ಎಲ್ಲರಿಗೂ ಮಂಗಳವಾಗಲಿ ಎಂಬ ಆಶಯ ಇದೆ. ವರ್ತಮಾನ ಕಾಲದಲ್ಲಿ ಹಿಂದೂಗಳು ಧರ್ಮದಿಂದ ದೂರ ಹೋಗಿರುವುದಕ್ಕೆ ಅನೇಕ ಸಂಕಟಗಳನ್ನು ಮತ್ತು ಆಘಾತಗಳನ್ನು ಎದುರಿಸಬೇಕಾಗಿದೆ. ಮುಂಬರುವ ಭೀಕರ ಆಪತ್ಕಾಲವನ್ನು ಎದುರಿಸಲು ಪ್ರತಿಯೊಬ್ಬರೂ ಆಧ್ಯಾತ್ಮಿಕ ಸಾಧನೆಯನ್ನು ಮಾಡಿ ಆಧ್ಯಾತ್ಮಿಕ ಬಲವನ್ನು ಹೆಚ್ಚಿಸುವುದರ ಅವಶ್ಯಕತೆ ಇದೆ. ನಾವೆಲ್ಲರೂ ಈ ಕ್ಷಣದಿಂದ ಧರ್ಮಪಾಲನೆಯನ್ನು ಮಾಡಿ ಸಾಧನೆಯನ್ನು ಪ್ರಾರಂಭಿಸಿ ಸನಾತನ ಧರ್ಮರಕ್ಷಣೆಯ ದಿವ್ಯ ಸಂಕಲ್ಪ ಮಾಡೋಣ ಎಂದು ಉಪಸ್ಥಿತರಿಗೆ ಕರೆ ನೀಡಿದರು.