ಡಿ.14-15: ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಸುವರ್ಣ ಮಹೋತ್ಸವ ಸಂಭ್ರಮ

  • 14 Dec 2024 04:49:16 PM

ಮಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಸುವರ್ಣ ಮಹೋತ್ಸವ ಸಂಭ್ರಮ ಡಿ.14 ಮತ್ತು 15ರಂದು ಮಂಗಳೂರಿನ ಟಿ.ಎಂ.ಎ ಪೈ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಯಲಿದೆ ಎಂದು ಕಾಲೇಜು ಪ್ರಾಂಶುಪಾಲ ತಾರಾನಾಥ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

 

ದಿನಾಂಕ 14 ರಂದು ಸ್ಥಾಪಕರ ದಿನಾಚರಣೆ: ಕೇರಳ ಹೈಕೋರ್ಟ್ ನ್ಯಾಯಾಧೀಶ ಹಾಗೂ ಎಸ್.ಡಿ.ಎಂ. ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ನ್ಯಾ. ಮುರಳೀ ಕೃಷ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿ ಪ್ರೊ. (ಡಾ) ಬಸವರಾಜು ಅಧ್ಯಕ್ಷತೆ ವಹಿಸಲಿದ್ದಾರೆ, ಹಿರಿಯ ವಕೀಲ ಉದಯ ಹೊಳ್ಳ ಪ್ರಧಾನ ಭಾಷಣವನ್ನು ನೀಡಲಿದ್ದಾರೆ.ಭಾರತದ ಸರ್ವೋಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿ, ಕಾಲೇಜಿನ ಪೂರ್ವ ವಿದ್ಯಾರ್ಥಿ ರೋಹಿತ್ ರಾವ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ತಮಿಳು ನಾಡಿನ ರಾಷ್ಟ್ರೀಯ ಕಾನೂನು ಶಾಲೆಯ ಕುಲಪತಿ ಪ್ರೊ. ನಾಗರಾಜ್‌ ಸ್ಥಾಪಕ ದಿನದ ಭಾಷಣ ಮಾಡಲಿದ್ದಾರೆ.

 

 

ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ, ಮತ್ತು ವಸ್ತು ಪ್ರದರ್ಶನದೊಂದಿಗೆ ಕಾರ್ಯಕ್ರಮವು ವೈಭವದಿಂದ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ.

 

ದಿನಾಂಕ 15 ರಂದು ಪೂರ್ವ ವಿದ್ಯಾರ್ಥಿ ಪನರ್‌ ಮಿಲನ ಕಾಠ್ಯಕ್ರಮ ನಡೆಯಲಿದ್ದು ಆಂಧ್ರ ಪ್ರದೇಶದ ರಾಜ್ಯಪಾಲರು, ಕಾಲೇಜಿನ ಪೂರ್ವ ವಿದ್ಯಾರ್ಥಿ ನ್ಯಾ. ಎಸ್. ಅಬ್ದುಲ್ ನಜೀರ್‌ ಸಭಾಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಘನ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಕಾಠ್ಯಕ್ರಮದಲ್ಲಿ ಭಾರತ ಸರಕಾರದ ಅಟಾರ್ನಿ ಜನರಲ್ ಡಾ. ಆರ್ ವೆಂಕಟ್ರಮಣಿ ಪ್ರದಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ವಿಧಾನ ಸಭೆಯ ಅಧ್ಯಕ್ಷರಾದ ಕಾಲೇಜಿನ ಪೂರ್ವ ವಿದ್ಯಾರ್ಥಿ ಯು.ಟಿ.ಖಾದರ್, ಭಾರತ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಕೆ.ಎಂ. ನಟರಾಜ್‌, ಕರ್ನಾಟಕ ಸರಕಾರದ ಹೆಚ್ಚುವರಿ ಎಡ್ವಕೇಟ್ ಜನರಲ್, ಕಾಲೇಜಿನ ಪೂರ್ವ ವಿದ್ಯಾರ್ಥಿ ಶಾಹುಲ್ ಹಮೀದ್ ರಹಮಾನ್ ಹಾಗೂ ಸರ್ವೊಚ್ಛ ನ್ಯಾಯಾಲಯದ ಹಿರಿಯ ನ್ಯಾಯವಾದಿ, ಕಾಲೇಜಿನ ಹಳೆ ವಿದ್ಯಾರ್ಥಿ ಶೇಖ‌ ದೇವಸ ಮುಖ್ಯ ಅತಿಥಿಗಳಾಗಿರುತ್ತಾರೆ.

 

ಸಾಂಸ್ಕೃತಿಕ ಕಾರ್ಯಕ್ರಮಗಳು, ಯಕ್ಷಗಾನ, ಮತ್ತು ವಸ್ತು ಪ್ರದರ್ಶನದೊಂದಿಗೆ ಕಾರ್ಯಕ್ರಮವು ವೈಭವದಿಂದ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಲಿದೆ. ಎಂದು ಪತ್ರಿಕಾಗೋಷ್ಟಿ ಯಲ್ಲಿ ತಿಳಿಸಿದ್ದಾರೆ.

 

ಪತ್ರಿಕಾಗೋಷ್ಠಿಯಲ್ಲಿ ಹವ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ದೇವರಾಜ ಕೆ, ಪುರುಷೋತ್ತಮ್ ಭಟ್, ಡಾ. ಬಾಲಿಕಾ ಸತ್ಯಾತ್ಮ ಮತ್ತಿತರರು ಉಪಸ್ಥಿತರಿದ್ದರು.