ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಚರಂಡಿಗೆ ಬಿದ್ದು ಅಪಘಾತ ಸಂಭವಿಸಿದ ಘಟನೆಯೊಂದು ವರದಿಯಾಗಿದೆ.
ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಬಸ್ಸು ಕುದ್ರೆಬೆಟ್ಟು ಬಳಿ ತಲುಪುತ್ತಿದ್ದ ಹಾಗೆ ಚಾಲಕನ ನಿಯಂತ್ರಣ ತಪ್ಪಿಬ್ರೇಕ್ ವೈಫಲ್ಯದಿಂದ ಬಸ್ಸು ಚರಂಡಿಗೆ ಇಳಿದಿದೆ ಎನ್ನಲಾಗುತ್ತಿದೆ.
ಈಗ ದೊರೆತ ಸುದ್ದಿಯಂತೆ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿಗೆ ಅಲ್ಪ ಮಟ್ಟಿನ ಹಾನಿಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.