ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ಜಾರಿ!ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ!

  • 02 Jun 2025 03:51:11 PM


ಪುತ್ತೂರು: ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲರವರ ವಿರುದ್ಧ ಕರ್ನಾಟಕ ಪೊಲೀಸ್ ಅಧಿನಿಯಮ, 1963ರ ಕಲಂ 58 ಮತ್ತು ಕಲಂ 55ರಡಿಯಲ್ಲಿ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಯಾಗಿದೆ.

 

ಆದೇಶದಂತೆ, ಜೂನ್ 6 ರಂದು ಸ್ವತಃ ಅಥವಾ ತಮ್ಮ ನ್ಯಾಯವಾದಿಯ ಮೂಲಕ ಅವರು ವಿಚಾರಣೆಗೆ ಹಾಜರಾಗಬಹುದು ಎಂದು ಇದನ್ನು ತಪ್ಪಿದಲ್ಲಿ ಸದರಿ ಈ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಾದ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. 

 

ಅರುಣ್ ಕುಮಾರ್ ಪುತ್ತಿಲ ಅವರು ಹಿಂದೂ ಸಂಘಟನೆಗಳೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದು, ಹಲವು ಬಾರಿ ವಿವಾದಾತ್ಮಕ ಮತ್ತು ಪ್ರಚೋದನಾತ್ಮಕ ವಿಷಯಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು .ಅವರು ಸ್ಥಳೀಯವಾಗಿ ಸಾಮಾಜಿಕವಾಗಿ ಬಹುಪಾಲು ಸಕ್ರಿಯರಾಗಿದ್ದು, ಸಾರ್ವಜನಿಕ ಜೀವನದಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗಿ ಗುರುತಿಸಲ್ಪಟ್ಟವರಾಗಿದ್ದಾರೆ.

 

ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು 62000ಕ್ಕೂ ಹೆಚ್ಚು ಮತವನ್ನು ಪಡೆದು ಜ್ಞಾ ಬೆಂಬಲ ಪಡೆದ ಅಂತಹ ಪುತ್ತಿಲರಿಗೆ ಗಡಿಪಾರು ಆದೇಶ ಖಂಡನೀಯವೆಂದು ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.