ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಪ್ರಸ್ತುತ ಜಿಲ್ಲಾ ಕಾರ್ಯದರ್ಶಿ ದೇವಪ್ಪ ಅವರು, ಇತ್ತೀಚೆಗೆ ಹತ್ಯೆಗೊಳಗಾದ ರಹೀಂ ಅವರ ಮನೆಗೆ ಸಾಂತ್ವನ ಹೇಳಲು ಭೇಟಿ ನೀಡಿದ್ದು, ಇದರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಭೇಟಿಗೆ ಹಿಂದೂ ಕಾರ್ಯಕರ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಭೇಟಿ ಅವಶ್ಯಕತೆಯಾದರೂ ಏನಿತ್ತು ಎಂಬುದಾಗಿ ಪ್ರಶ್ನಿಸಿದ್ದಾರೆ. ಅವರ ಅಭಿಪ್ರಾಯದಲ್ಲಿ, ಅಮಾಯಕ ಹಿಂದೂ ಕಾರ್ಯಕರ್ತರು ಮತಾಂಧರಿಂದ ಹತ್ಯೆಯಾಗಿದ್ದಾಗ ಇಂತಹ ಸಾಂತ್ವನದ ನಡಿಗೆಗಳು ಮುಸ್ಲಿಂ ಸಂಘಟನೆಗಳಿಂದ ಬಂದಿದೆಯೇ? ಇದನ್ನು ಖಂಡಿಸಿದ್ದಾರೆಯೇ? ಇದನ್ನೆಲ್ಲಾ ಗಮನಿಸಬೇಕಾಗಿದೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕೆಲವು ಬರಹಗಳು ಇವರ ರಾಜಕೀಯ ನಿಲುವು ಹಾಗೂ ಪಕ್ಷದ ನಿಷ್ಠೆ ಕುರಿತ ಪ್ರಶ್ನೆಗಳನ್ನು ಎತ್ತಿವೆ.