ಪುತ್ತೂರು: ಅರುಣ್ ಪುತ್ತಿಲ ವಿರುದ್ಧದ ಗಡಿಪಾರು ನೋಟಿಸ್ ವಿಚಾರದಲ್ಲಿ ಪುತ್ತೂರು ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ, ಪೊಲೀಸರು ತಮಗಿರುವ ಸಮರ್ಪಕ ದಾಖಲೆಗಳನ್ನು ಸಲ್ಲಿಸಡೆಯ್ಟುವ ಕಾರಣ, ವಿಚಾರಣೆಯನ್ನು ಮುಂದೂಡಲಾಗಿದೆ.
ಅರುಣ್ ಪುತ್ತಿಲ ಪರವಾಗಿ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಅವರು ನ್ಯಾಯಾಲಯದಲ್ಲಿ ವಾದ ಪ್ರಸ್ತಾಪಿಸಿದರು.
ಪೊಲೀಸರು ಈವರೆಗೆ ಯಾವುದೇ ದೃಢವಾದ ದಾಖಲೆಗಳನ್ನು ಸಲ್ಲಿಸದೇ ಇರುವುದರಿಂದ, ನ್ಯಾಯಾಲಯವು ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದೆ.
ಆ ವೇಳೆಗೆ ಪೂರಕ ದಾಖಲೆಗಳನ್ನು ಸಲ್ಲಿಸುವಂತೆ ಸ್ಪಷ್ಟವಾದ ನಿರ್ದೇಶನ ನೀಡಿದೆ.