ನವದೆಹಲಿ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರ ರೋಚಕ ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ತನಿಖಾ ದಳ (NIA) ಗೆ ವಹಿಸಿರುವುದು ಅಧಿಕೃತವಾಗಿದೆ.
ಈ ನಿರ್ಧಾರ ಬಿಜೆಪಿ ಕಾರ್ಯಕರ್ತರ ನಿರಂತರ ಒತ್ತಾಯ ಮತ್ತು ಹೋರಾಟದ ಫಲವಾಗಿದೆ.
ಈ ಪ್ರಕರಣಕ್ಕೆ ನ್ಯಾಯ ದೊರಕಿಸಬೇಕೆಂದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹಲವು ಹಂತಗಳಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸರ್ಕಾರವು ಎನ್ಐಎ ತನಿಖೆಗೆ ಸಮ್ಮತಿ ನೀಡಿರುತ್ತದೆ.
ಪೊಲೀಸರು ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಎನ್ಐಎ ಪ್ರವೇಶದಿಂದ ಪ್ರಕರಣ ಇನ್ನಷ್ಟು ಪ್ರಾಮಾಣಿಕವಾಗಿ ಮತ್ತು ವ್ಯಾಪಕವಾಗಿ ತನಿಖೆಯಾಗಲಿದೆ ಎಂಬ ನಿರೀಕ್ಷೆಯಿದೆ.