ಗುಜರಾತ್: ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮಧ್ಯಾಹ್ನ ಭಯಾನಕ ವಿಮಾನ ಅಪಘಾತ ಸಂಭವಿಸಿರುತ್ತದೆ.
ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾದ ಬೋಯಿಂಗ್ 787 ಡ್ರೀಮ್ಲೈನ್ ಪ್ರಯಾಣಿಕ ವಿಮಾನ ಟೇಕಾಫ್ ವೇಳೆ ಹತ್ತಿರದ ಮರಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.
ವಿಮಾನದಲ್ಲಿ ಒಟ್ಟು 242 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಯಿಂದ ವಿಮಾನ ಸಂಪೂರ್ಣವಾಗಿ ನಾಶವಾಗಿದ್ದು, ಹೆಚ್ಚಿನ ಭಾಗಗಳು ಸುಟ್ಟು ಬೂದಿಯಾಗಿದೆ. ವಿಮಾನ ಬಿದ್ದ ಸ್ಥಳದ ಕಟ್ಟಡಕ್ಕೂ ಹಾನಿಯಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಸ್ಥಳೀಯ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದು, ವಿಮಾನ ನಿಲ್ದಾಣದ ಬಳಿ ಇರುವ ಸಿವಿಲ್ ಆಸ್ಪತ್ರೆಯ ಎಲ್ಲಾ ವೈದ್ಯರ ರಜೆ ತಾತ್ಕಾಲಿಕವಾಗಿ ರದ್ದುಪಡಿಸಿ ಗಾಯಾಳುಗಳಿಗೆ ತುರ್ತು ಸೇವೆಗಳನ್ನು ಸಜ್ಜುಗೊಳಿಸಲಾಗಿದೆ.
ಅಧಿಕೃತ ಪ್ರಮಾಣೀಕರಣಕ್ಕೆ ಕಾಯಲಾಗುತ್ತಿದ್ದು, ಅಪಘಾತದ ನಿಖರ ಕಾರಣ ತಿಳಿಯಬೇಕಾದ್ದು ಇನ್ನು ಬಾಕಿ ಇದೆ.
ಈ ಭೀಕರ ಘಟನೆಯು ರಾಷ್ಟ್ರಮಟ್ಟದಲ್ಲಿ ಆತಂಕ ಸೃಷ್ಟಿಸಿದ್ದು, ಏರ್ ಇಂಡಿಯಾ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಧಿಕೃತ ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.