ಜೇವರಗಿ, ಕಲಬುರ್ಗಿ: ಅಂತರಾಷ್ಟ್ರೀಯ ಹಿಂದೂ ಪರಿಷತ್ ಹಾಗೂ ರಾಷ್ಟ್ರೀಯ ಬಜರಂಗದಳ ಜೇವರಗಿ ತಾಲೂಕು ಘಟಕದ ಆಶ್ರಯದಲ್ಲಿ ಜೂನ್ 18, 2025 (ಬುಧವಾರ) ರಂದು ನಗರದ ಸಜ್ಜನ್ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಹಿಂದೂ ಧರ್ಮ ಸಭೆ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 3 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ, ಹಿಂದೂ ಪರಂಪರೆ, ಧರ್ಮ, ಹಾಗೂ ಸಮಾಜದ ಬಾಳ್ವೆಯ ಬಗ್ಗೆ ತಿಳುವಳಿಕೆಯನ್ನು ನೀಡಲಿದೆ.
ಈ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿರುವ ಡಾ. ಪ್ರವೀಣ್ ಭಾಯ್ ತೊಗಡೆ, ಈ ಸಂದರ್ಭದಲ್ಲಿ ಮುಖ್ಯ ಭಾಷಣ ನೀಡಲಿದ್ದಾರೆ.
ಜೊತೆಗೆ ವಿವಿಧ ಮಠಾಧೀಶರೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹಿಂದೂ ಕಾರ್ಯಕರ್ತರು, ಧರ್ಮಾಭಿಮಾನಿಗಳು ಮತ್ತು ಸಾರ್ವಜನಿಕರನ್ನು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿಕೊಂಡಿದ್ದಾರೆ.