ಬಂಟ್ವಾಳ : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಉದ್ದಲೆಕೋಡಿ ಎಂಬಲ್ಲಿ ಭಾರೀ ಮಳೆಯ ಪರಿಣಾಮವಾಗಿ ಸುಧೀಂದ್ರ ಅವರ ಮನೆ ಹಾಗೂ ಅಲ್ಲಿನ 10ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಮುಂಗಾರು ಮಳೆಯ ತೀವ್ರತೆಗೆ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ಹಲವೆಡೆ ನೀರು ನುಗ್ಗಿರುವ ದೃಶ್ಯಗಳು ಕಂಡುಬರುತ್ತಿವೆ.
ಸ್ಥಳಕ್ಕೆ ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ವಿ ಎ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿ ಮನೆಯ ಜನರೊಂದಿಗೆ ಮಾತನಾಡಿ ಅವರು ಧೈರ್ಯ ತುಂಬಿದರು. ಮತ್ತು ಅಗತ್ಯ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದರು.