ಬೆಳ್ತಂಗಡಿ: ವೇಶ್ಯಾವಾಟಿಕೆ ಚಟುವಟಿಕೆಗೆ ಸಂಬಂಧಿಸಿದ ಮಾಹಿತಿ ದೊರೆತ ಆಧಾರದ ಮೇಲೆ ಜೂನ್ 14ರಂದು ರಾತ್ರಿ ಬೆಳ್ತಂಗಡಿ ಪೊಲೀಸರು ಲಾಡ್ಜ್ಗಳ ಮೇಲೆ ದಾಳಿ ನಡೆಸಿದ್ದಾರೆ.
ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದ ತಂಡವು ಬೆಳ್ತಂಗಡಿ ಹಾಗೂ ಉಜಿರೆಯ ಲಾಡ್ಜ್ಗಳಲ್ಲಿ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಉಜಿರೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಶ್ರೀ ದುರ್ಗಾ ಲಾಡ್ಜ್ನಲ್ಲಿ ವೇಶ್ಯಾವಾಟಿಕೆಗೆ ಯುವತಿಯನ್ನು ಕರೆತರಲಾಗಿದ್ದ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರು ಆ ಯುವತಿಯನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಈ ಸಂಬಂಧ ಲಾಡ್ಜ್ ಮ್ಯಾನೇಜರ್ ಸತೀಶ್ ಪೂಜಾರಿ (49), ಸಾವ್ಯ ಗ್ರಾಮದ ಬಾರೆಗುಡ್ಡೆ ಹಾಗೂ ಯೋಗೀಶ್ ಆಚಾರ್ಯ (49), ಕನ್ಯಾಡಿ, ಧರ್ಮಸ್ಥಳ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ, ಮ್ಯಾನೇಜರ್ ಸತೀಶ್ ಪೂಜಾರಿ ಹಾಗೂ ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧ ತನಿಖೆ ಮುಂದುವರೆತಿದ್ದು, ಇನ್ನಷ್ಟು ವಿವರಗಳು ಹೊರಬರುವ ನಿರೀಕ್ಷೆಯಿದೆ.