ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕಳೆದ ಹಲವಾರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮವಾಗಿ ಮದುವಾಹಿನಿ ನದಿಯು ಉಕ್ಕಿಹರಿದು ಪ್ರಸಿದ್ಧ ಮಧೂರು ಶ್ರೀ ಸಿದ್ದಿವಿನಾಯಕ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ.
ಪ್ರತಿ ಮಳೆಗಾಲದಲ್ಲಿಯೂ ಮದುವಾಹಿನಿಯಿಂದ ನೀರು ದೇಗುಲದೊಳಗೆ ನುಗ್ಗುವುದು ಸಾಮಾನ್ಯವಾಗಿ ಕಂಡುಬರುತ್ತಿದ್ದರೂ, ಈ ಬಾರಿ ಮಳೆಯ ಪ್ರಮಾಣ ಜಾಸ್ತಿಯಾದ್ದರಿಂದ ಇನ್ನೊಂದು ಭಾರಿ ದೇಗುಲದ ಆವರಣ ಜಲಾವೃತಗೊಂಡಿದೆ.
ಮಳೆಯ ತೀವ್ರತೆಯಿಂದಾಗಿ ಜಿಲ್ಲೆಯಲ್ಲಿ ಹಲವಾರು ಮುಖ್ಯ ರಸ್ತೆಗಳಲ್ಲಿ ನೀರು ತುಂಬಿಕೊಂಡಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕೆಲವೆಡೆ ಬಸ್ಸು ಹಾಗೂ ಇತರ ವಾಹನಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ.
ತಗ್ಗು ಪ್ರದೇಶಗಳಲ್ಲಿ ವಾಸವಿರುವ ಜನರ ಮನೆ ಸುತ್ತ ನೀರು ನುಗ್ಗಿ, ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ.