ಬೆಂಗಳೂರು : ರಾಜ್ಯದಲ್ಲಿ ಆಡಳಿತಾತ್ಮಕ ಬದಲಾವಣೆ: ದಕ್ಷಿಣ ಕನ್ನಡ ಹಾಗೂ ಉಡುಪಿಗೆ ಹೊಸ ಜಿಲ್ಲಾಧಿಕಾರಿಗಳು ನೇಮಕ!

  • 18 Jun 2025 04:03:01 PM


ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆಯ ಭಾಗವಾಗಿ ಮಂಗಳವಾರ (ಜೂನ್ 18) ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾಯಿಸಿದ್ದಾರೆ.

 

ಹೊಸ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮುಲ್ಲೆ ಮುಗಿಲನ್ ಅವರನ್ನು ವರ್ಗಾಯಿಸಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಇನ್ಸ್‌ಪೆಕ್ಟರ್ ಜನರಲ್‌ ಆಗಿ ನೇಮಕ ಮಾಡಲಾಗಿದೆ.

 

 ಅವರ ಸ್ಥಾನಕ್ಕೆ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಹೆಚ್ಚುವರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದರ್ಶನ್ ಎಚ್.ವಿ ಅವರನ್ನು ಹೊಸ ಜಿಲ್ಲಾಧಿಕಾರಿಯಾಗಿ ನೇಮಿಸಿದ್ದಾರೆ.

 

ಉಡುಪಿ ಜಿಲ್ಲೆಯ ಡಿಸಿ ವಿದ್ಯಾಕುಮಾರಿ ಅವರನ್ನೂ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ ಅವರನ್ನು ಉಡುಪಿ ಜಿಲ್ಲೆಯ ಹೊಸ ಡಿಸಿಯಾಗಿ ನೇಮೀಸಲಾಗಿದೆ.

 

ಇದು ಸರ್ಕಾರಿ ಅಧಿಸೂಚನೆ ಸಂಖ್ಯೆ ಇ-ಡಿಪಿಎಆರ್ 197 ಎಸ್ಎಎಸ್ 2025 ಅಡಿಯಲ್ಲಿ ಜಾರಿ ಮಾಡಲಾಗಿದ್ದು, ಈ ಬದಲಾವಣೆಗಳು ಕರ್ನಾಟಕ ರಾಜ್ಯದಾದ್ಯಂತ 17 ಐಇಎಸ್ ಅಧಿಕಾರಿಗಳನ್ನು ಒಳಗೊಂಡಿದೆ.

 

 ಎಲ್ಲಾ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುತ್ತವೆ ಹಾಗೂ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತವೆ.

 

ಹೊಸದಾಗಿ ನೇಮಕಗೊಂಡ ಅಧಿಕಾರಿಗಳು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆ ಇದೆ.