ದಕ್ಷಿಣ ಕನ್ನಡಕ್ಕೆ ಹೊಸ ಡಿಸಿ: ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ!

  • 19 Jun 2025 11:02:32 AM


ದ.ಕ: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.

 

ಈ ಸಂದರ್ಭದಲ್ಲಿ ನಿರ್ಗಮನ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ ಅವರು ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರಿಗೆ ಅಧಿಕೃತವಾಗಿ ಅಧಿಕಾರ ಹಸ್ತಾಂತರಿಸಿದರು.

 

 ಮುಲ್ಲೈ ಮುಗಿಲನ್ ಅವರು ಜೂನ್ 17, 2023 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದರು. 

 

ಸುದ್ದಿಗೋಷ್ಠಿಯಲ್ಲಿ ಅಧಿಕಾರ ಹಸ್ತಾಂತರದ ಬಳಿಕ ಮಾತನಾಡಿದ ಮುಲ್ಲೈ ಮುಗಿಲನ್, “ಜಿಲ್ಲೆಯ ಜನತೆ, ಅಧಿಕಾರಿಗಳು, ಮತ್ತು ಪ್ರತಿಷ್ಠಿತ ಸಂಸ್ಥೆಗಳ ಸಹಕಾರದಿಂದ ಸೇವೆ ಸಲ್ಲಿಸಲು ಸಾಧ್ಯವಾಯಿತು” ಎಂದು ಕೃತಜ್ಞತೆ ವ್ಯಕ್ತಪಡಿಸಿದರು.

 

ದರ್ಶನ್ ಎಚ್.ವಿ ಅವರ ನೇಮಕದಿಂದಾಗಿ ಜಿಲ್ಲಾಡಳಿತದಲ್ಲಿ ಹೊಸ ಚೈತನ್ಯ ಮೂಡಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.