ಮಂಗಳೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಚಾಲಕ ಸಮಿತ್ ರಾಜ್ ಅವರನ್ನು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಗುರುವಾರ ಬಂಧಿಸಲಾಗಿದೆ.
ಠಾಣೆಗೆ ಭೇಟಿಯಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಪೊಲೀಸರ ಜೊತೆ ವಾಗ್ವಾದ ಉಂಟಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಘಟನೆಯ ಕುರಿತು ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಬಂಧನವನ್ನು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಚರ್ಚೆ ಜೋರಾಗಿದ್ದು, ಹೆಚ್ಚಿನ ವಿವರಗಳು ನಿರೀಕ್ಷೆಯಲ್ಲಿವೆ.