38ನೇ ಎಡನೀರು ಗಣೇಶೋತ್ಸವಕ್ಕೆ ಭವ್ಯ ಆರಂಭ; ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಆಮಂತ್ರಣ ಬಿಡುಗಡೆ

  • 13 Jul 2025 06:13:17 PM


ಎಡನೀರು: 38ನೇ ಎಡನೀರು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಇಂದು (ಶನಿವಾರ, 12-07-2025) ಶ್ರೀಮಠದಲ್ಲಿ ವಿಜೃಂಭಣೆಯಿಂದ ನೆರವೇರಿತು.

 

ಈ ಕಾರ್ಯಕ್ರಮದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಉಜಿರೆಯ ಶ್ರೀ ಅಶೋಕ್ ಭಟ್, ಎಡನೀರು ಮಠದ ವ್ಯವಸ್ಥಾಪಕರಾದ ಶ್ರೀ ರಾಜೇಂದ್ರ ಕಲ್ಲೂರಾಯ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ಮಾಧವ ಹೇರಳ ಕಳೇರಿ, ಉತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಈ. ಶಾಂತಾ ಟೀಚರ್, ಮಾತೃ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ಕಲ್ಲೂರಾಯ ಹಾಗೂ ಸಮಿತಿಯ ಇತರ ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿದರು.