ರಿಪಬ್ಲಿಕ್ ಹಿಂದೂ:- ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಚಿತ್ರ ಇಡೀ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು. ಬಾಲಿವುಡ್ ಚಿತ್ರರಂಗ ಸಹಿತ ಅನೇಕ ಸೆಲೆಬ್ರೆಟಿಗಳು, ದೇಶದ ಪ್ರಧಾನಿ ಈ ಚಿತ್ರವನ್ನು ಆಡಿ ಕೊಂಡಾಡಿದ್ದರು. ಇದೀಗ ಕಾಂತಾರ ೧ ಚಿತ್ರೀಕರಣ ನಡೆಯುತ್ತಿದೆ. ಹೀಗಿರುವಾಗಲೇ ದುರಂತವೊಂದು ಸಂಭವಿಸಿದ್ದು ಕಾಂತಾರ ಟೀಂ ಶಾಕ್ ಆಗಿದೆ.
ಕಾಂತಾರ:ಚಾಪ್ಟರ್ 1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ...!!
ಹೌದು ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 25 ಮಂದಿ ನೃತ್ಯ ಕಲಾವಿದರನ್ನು ಕರೆದುಕೊಂಡು ಸಾಗುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದು, ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲ್ಲೂರಿನಲ್ಲಿ ನಡೆಯುತ್ತಿದ್ದ ಚಿತ್ರೀಕರಣ...!!
ಕೊಲ್ಲೂರು ಹಾಲ್ಕಲ್ ಮಾರ್ಗದಲ್ಲಿ ಘಟನೆ ನಡೆದಿದ್ದು ಇದೇ ಭಾಗದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಗಾಯಾಳುಗಳ ಪೈಕಿ ಹಲವರಿಗೆ ಜಡ್ಕಲ್ ಮಹಾಲಕ್ಷ್ಮಿ ಕ್ಲಿನಿಕ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜ್ಯೂನಿಯರ್ ನೃತ್ಯ ಕಲಾವಿದರು ಹಾಡಿನ ಶೂಟಿಂಗ್ ಹಿನ್ನೆಲೆ ಇಲ್ಲಿಗೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಇನ್ನೂ ನಾಲ್ಕು ದಿನಗಳ ಕಾಲ ಚಿತ್ರೀಕರಣ ಬಾಕಿಯಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.