ಹುಬ್ಬಳ್ಳಿ: ರಾಜ್ಯ ಸರ್ಕಾರದ ಅನೇಕ ಭ್ರಷ್ಟಾಚಾರಗಳು ಬಯಲಿಗೆ ಬಂದಿದೆ. ಮೂಡಾ ಹಗರಣದ ವಿಚಾರವಾಗಿ ಸಿಎಂ ಸಿದ್ಧರಾಮಯ್ಯನವರ ಅಧಿಕಾರದ ಕುರ್ಚಿ ಅಲುಗಾಡುತ್ತಿದೆ. ಕಾಂಗ್ರೆಸ್ಸಿನ ನಿಜವಾದ ಮುಖ ಏನೆಂಬುದು ಈಗ ಜನಸಾಮಾನ್ಯರಿಗೆ ಕೂಡಾ ಅರ್ಥವಾಗುತ್ತಿದೆ. ಈ ಎಲ್ಲದರ ಮಧ್ಯೆ ಸಿಎಂ ಅವರ ಆಪ್ತ ಸಲಹೆಗಾರ ಅಚ್ಚರಿ ಹೇಳಿಕೆ ನೀಡಿರುವುದರ ಮುಖೇನ ಬಾಂಬ್ ಸಿಡಿಸಿದ್ದಾರೆ.
ಸಿದ್ಧರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ..!!
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಅವರ ಆಪ್ತ ಸಲಹೆಗಾರ ಬಿ.ಆರ್ ಪಾಟೀಲ್ ಸಿಎಂ ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ. ಆದರೆ, ಅವರು ಐದು ವರ್ಷ ಇರಬೇಕು ಅಂತಾ ಬಯಸುತ್ತೇವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಅಂತ ಹೇಳಲು ಸಾಧ್ಯವಿಲ್ಲ. ಹೈಕಮಾಂಡ್ ಬೇರೆ ನಿರ್ಧಾರ ತೆಗೆದುಕೊಂಡರೆ ನಾವೇನು ಮಾಡುವುದಕ್ಕೆ ಆಗುತ್ತೆ? ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಇನ್ನೂ ದೊಡ್ಡ ಜವಾಬ್ದಾರಿ ನೀಡಬಹುದು. ನೀಡದೆನೂ ಇರಬಹುದು. ಒಟ್ಟಾರೆಯಾಗಿ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಬೇಕು ಅಂತ ಮಾತ್ರ ಯಾವ ಶಾಸಕರ ಮನಸ್ಸಿನಲ್ಲಿಯೂ ಇಲ್ಲ. ಏನಾಗುತ್ತೊ ಕಾದುನೋಡಬೇಕು ಎಂಬಂತಹ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.
ಗ್ಯಾರಂಟಿಯಿಂದ ಆರ್ಥಿಕ ಹೊಡೆತ ಆಗದಂತೆ ನೋಡ್ಕೋತ್ತೇವೆ...
ಬಹುದೊಡ್ಡ ಯೋಜನೆ ಸಾಕಾರಗೊಂಡಾಗ ಭೌತಿಕ ಅಭಿವೃದ್ಧಿಗೆ ಹೊಡೆತ ಬೀಳುತ್ತೆ. ಈ ಬಾರಿಯ ಬಜೆಟ್ನಲ್ಲಿ ಗ್ಯಾರಂಟಿಯಿಂದ ಆರ್ಥಿಕ ಹೊರೆ ಆಗದಂತೆ ಹೊಸ ಆರ್ಥಿಕ ನೀತಿ ಸಿಎಂ ನೀಡ್ತಾರೆ. ನಮಗೆ ಮೊದಲೇ ಗೊತ್ತಿತ್ತು. ಇಷ್ಟು ಖರ್ಚು ಆಗುತ್ತೆ ಅಂತಾ. ಆರ್ಥಿಕ ಸಮಸ್ಯೆ ನಮಗೆ ಮಾತ್ರವಲ್ಲಾ ಎಲ್ಲಾ ರಾಜ್ಯಗಳಿಗಿದೆ. ಸಮಸ್ಯೆ ಆಗುತ್ತಿದೆ ಸ್ವಲ್ಪ ಹೊರೆ ಆಗುತ್ತೆ. ದೊಡ್ಡ ಸಮಸ್ಯೆಗೆ ಕೈ ಹಾಕಿದಾಗ ಸ್ವಲ್ಪ ಸಮಸ್ಯೆ ಉದ್ಭವ ಆಗುತ್ತೆ. ಕಲ್ಯಾಣ ರಾಜ್ಯದ ಪರಿಕಲ್ಪನೆ ಕಾಣುತ್ತಿದ್ದೇವೆ. ಎಲ್ಲರಿಗೂ ಸಮಪಾಲು ಸಮಬಾಳು. ಐದು ಗ್ಯಾರಂಟಿಗಳು ಬಹಳಷ್ಟು ಯಶಸ್ವಿಯಾಗಿ ಅನುಷ್ಠಾನ ಆಗುತ್ತಿವೆ. ಅಷ್ಟೇ ಆರ್ಥಿಕ ಅಡಚಣೆಗಳು ಕೂಡಾ ಆಗಿವೆ. ಇದರ ಜೊತೆಗೆ ಇದರಿಂದ ಬಹಳಷ್ಟು ರಾಜಕೀಯ ಲಾಭ ಆಗುತ್ತಿದೆ ಎಂದು ಕೂಡಾ ಹೇಳಿದರು.