ಮಂಗಳೂರು: ಅನೇಕ ಸಮಸ್ಯೆಗಳಿಗೆ ಸಂಸದ ಚೌಟ ಅವರು ಶೀಘ್ರವಾಗಿ ಪರಿಹಾರವನ್ನು ನೀಡುತ್ತಾರೆ. ಹೆಮ್ಮೆಯ ಸಂಸದರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಸುಮಾರು ಎಂಟು ವರ್ಷಗಳಿಂದ ಕಗ್ಗಂಟಾಗಿದ್ದ ಉದ್ಯೋಗಿಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ.
ಉದ್ಯೋಗಿಗಳ ಬಹುಕಾಲದ ಬೇಡಿಕೆಗೆ ವ್ಯವಸ್ಥಿತ ಕ್ರಮ ವಹಿಸುವಂತೆ ಕೇಂದ್ರ ಸಚಿವರಿಗೆ ಮನವಿ...!
ಮಂಗಳೂರಿನಲ್ಲಿರುವ ಇಂಡಿಯನ್ಸ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ಸ್ ಲಿಮಿಟೆಡ್ ನ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುತ್ತಿರುವ ಉದ್ಯೋಗಿಗಳ ವೇತನ ತಾರತಮ್ಯ, ಭತ್ಯೆ, ಭಡ್ತಿ ಸಮಸ್ಯೆಗೆ ವ್ಯವಸ್ಥಿತ ಎಚ್ ಆರ್ ನೀತಿ ಅನುಷ್ಠಾನಗೊಳಿಸುವಂತೆ ಸಂಸದ ಚೌಟ ಅವರು ಕೇಂದ್ರ ಪೆಟ್ರೋಲಿಯಮ್ ಹಾಗೂ ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ಪಂಕಜ್ ಜೈನ್ ಅವರಲ್ಲಿ ಮನವಿ ಮಾಡಿದ್ದಾರೆ.
ಕೇಂದ್ರ ಸಚಿವರಲ್ಲಿ ಸಂಸದರು ಇಟ್ಟ ಬೇಡಿಕೆ ಏನು...?
ದೆಹಲಿಯಲ್ಲಿ ಸಚಿವ ಪಂಕಜ್ ಅವರನ್ನು ಭೇಟಿ ಮಾಡಿದ ಸಂಸದರು ಸುಮಾರು ಎಂಟು ವರ್ಷಗಳಿಂದ ಬಗೆಹರಿಯದೆ ತೊಂದರೆ ಅಬುಭವಿಸುತ್ತಿರುವ ಮಂಗಳೂರಿನ ಐಎಸ್ಪಿಆರ್ ಎಲ್ ಉದ್ಯೋಗಿಗಳ ಸಮಸ್ಯೆಗೆ ಶೀಘ್ರವಾಗಿ ಸ್ಪಂದಿಸುವಂತೆ ಕೋರಿಕೆ ಸಲ್ಲಿಸಿದ್ದಾರೆ.
ಜತೆಗೆ ಕಚ್ಚಾ ತೈಲ ಸಂಗ್ರಹಾಗಾರ ಘಟಕದಲ್ಲಿ ದುಡಿಯುವ ಉದ್ಯೋಗಿಗಳಿಗೆ ವ್ಯವಸ್ಥಿತ ಸಂಪನ್ಮೂಲಗಳಿಲ್ಲದೆ ಏನೆಲ್ಲ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಸುದೀರ್ಘವಾಗಿ ಚರ್ಚಿಸಿ ನೌಕರರ ಗಂಭೀರ ಸಮಸ್ಯೆಗೆ ಶೀಘ್ರವಾಗಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.