ಕಜಂಪಾಡಿ: ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನದ ಪ್ರಯುಕ್ತ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿನ 203ನೇ ಬೂತ್ ಕಜಂಪಾಡಿಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಬಾಲಕರು ಉಪಸ್ಥಿತರಿದ್ದರು. ಸಂವಿಧಾನ ಶಿಲ್ಪಿಗೆ ನಮನಗಳನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ಸಮಾಜ ಸೇವೆ, ಶಿಕ್ಷಣ ಮತ್ತು ಸಮಾನತೆಯ ಪರ ಹೋರಾಟವನ್ನು ಸ್ಮರಿಸಿದರು.