ಜಮ್ಮು ಮತ್ತು ಕಾಶ್ಮೀರ: ಪಹಲ್ಗಾಮ್ನಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಘಾತ ಉಂಟುಮಾಡಿದೆ.
ಸೌದಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ದಾಳಿಯ ಸಂಪೂರ್ಣ ಮಾಹಿತಿ ಪಡೆದಿದ್ದು, ತಕ್ಷಣದ ಕ್ರಮ ಕೈಗೊಳ್ಳುವಂತೆ ಹಾಗೂ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಪ್ರಧಾನಿ ಸೂಚನೆಯಂತೆ ಅಮಿತ್ ಶಾ ಅವರು ತಕ್ಷಣವೇ ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ದರು.
ಈ ಸಭೆಯಲ್ಲಿ ಗುಪ್ತಚರ ವಿಭಾಗದ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಉಪಸ್ಥಿತರಿದ್ದರು.
ಅದಾದ ಬಳಿಕ ಅಮಿತ್ ಶಾ ಅವರು ತುರ್ತಾಗಿ ಪಹಲ್ಗಾಮ್ ಕಡೆಗೆ ಪ್ರಯಾಣ ಹೊರಟಿದ್ದು ಭದ್ರತಾ ವ್ಯವಸ್ಥೆಯ ಕುರಿತು ಸಮೀಕ್ಷೆ ನಡೆಸಲಿದ್ದಾರೆ.
ಈ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ ಎಂಬ ದುಃಖದ ಮಾಹಿತಿ ದೊರೆತಿದ್ದು, ಇನ್ನೂ 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ನೆರವು ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಯುತ್ತಿದೆ. ಭದ್ರತಾ ಪಡೆಗಳು ಹಾಗೂ ವೈದ್ಯಕೀಯ ತಂಡಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ತಿಳಿದು ಬಂದಿದೆ.