ಜಮ್ಮು ಕಾಶ್ಮೀರ: ಪಹಲ್ಗಾಮ್ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗದ ಕನ್ನಡಿಗ ಉದ್ಯಮಿ ಮಂಜುನಾಥ್ ರಾವ್ ಸಾವು

  • 22 Apr 2025 10:43:26 PM


ಜಮ್ಮುಕಾಶ್ಮೀರ :ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವನ್ನಪ್ಪಿದ್ದಾರೆ. 

 

ಈ ದಾಳಿಯಲ್ಲಿ ಇತರ 12 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣ ರಕ್ಷಿಸಿದ್ದಾರೆ.

 

ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ್ ಜೊತೆ ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ಏಪ್ರಿಲ್ 19ರಂದು ತೆರಳಿದ್ದರು. ಮಂಜುನಾಥ್ ರಾವ್ ಭಯೋತ್ಪಾದಕರ ದಾಳಿಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಪತ್ನಿ ಪಲ್ಲವಿ ಹಾಗೂ ಅವರ ಪುತ್ರ ಅಭಿಜೇಯ ಅವರ ಸುರಕ್ಷಿತವಾಗಿದೆ ಎಂಬ ಮಾಹಿತಿ ಲಭಿಸಿದೆ.

 

ಮಂಜುನಾಥ್ ಕುಟುಂಬಸ್ಥರು ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ಹೊರಟಿದ್ದರು. ಆದರೆ ಉಗ್ರರ ದಾಳಿಯಲ್ಲಿ ಸಿಲುಕಿ ಸಾವನಪ್ಪಿದ್ದಾರೆ.