ಜಮ್ಮುಕಾಶ್ಮೀರ: ಪಹಲ್ಗಾಮ್ನಲ್ಲಿ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, “ಈ ಹೇಯ ಕೃತ್ಯದ ಹಿಂದೆ ಇರುವವರನ್ನು ಖಂಡಿತವಾಗಿಯೂ ಕ್ಷಮಿಸುವುದಿಲ್ಲ.ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದೂ ಅವರ ದುಷ್ಟ ಉದ್ದೇಶಗಳು ಯಶಸ್ವಿಯಾಗುವುದಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ತಮ್ಮ ಪೋಸ್ಟ್ನಲ್ಲಿ ಈ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಎಂದು ತಿಳಿಸಿ, “ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.
ಅದಲ್ಲದೆ ಸಂತ್ರಸ್ತರಿಗೆ ಎಲ್ಲ ರೀತಿಯ ಅಗತ್ಯ ಸಹಾಯ ನೀಡಲಾಗುತ್ತಿದೆ. ಈ ದಾಳಿಯ ಹಿಂದೆ ಇರುವ ಉಗ್ರರನ್ನು ಬಿಟ್ಟುಕೊಡಲಾಗದು ಎಂದೂ ಅವರು ಸೂಚಿಸಿದ್ದಾರೆ.