ಎಡನೀರು ಶ್ರೀಗಳ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ, ಬೆನ್ನಲ್ಲೇ ಎಡನೀರು ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

  • 05 Nov 2024 05:13:58 PM

ಎಡನೀರು-  ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಜೊತೆ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ , ಸ್ವಾಮಿಜೀಯ ಕಾರಿನ ಮೇಲಾದ ದಾಳಿಯ ಘಟನೆಯ ಕುರಿತು ಮಾಹಿತಿ ಪಡೆದುಕೊಂಡು ಧೈರ್ಯ ತುಂಬಿದರು.. 

 

ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಎಡನೀರು ಸಂಸ್ಥಾನದ ಸ್ವಾಮೀಜಿಗಳ ವಾಹನದ ಮೇಲೆ ಕೇರಳದ ಎಡಪಂಥೀಯ ಸರ್ಕಾರ ಪ್ರೇರಿತ ದಾಳಿಯನ್ನು ಖಂಡಿಸುತ್ತಾ , ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕೇರಳ ಸರ್ಕಾರ ನೀಡಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ

 

ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಬೋವಿಕಾನ - ಇರಿಯಣ್ಣಿ ಮಾರ್ಗ ಮಧ್ಯೆ ವಾಹನವನ್ನು ತಡೆದ ಪುಂಡರ ತಂಡವೊಂದು ತಗಾದೆ ಎಬ್ಬಿಸಿತ್ತು. ಇದೇ ದಾರಿಯಲ್ಲಿ ಕಾರ್ಯಕ್ರಮ ಮುಗಿಸಿ ಮರಳಿ ಬರುವಾಗ ಇರಿಯಣ್ಣಿಯಿಂದಲೇ ಹಿಂಬಾಲಿಸಿದ ಬಂದವರ ಪೈಕಿ ಬಾವಿಕೆರೆ ಎಂಬಲ್ಲಿ ದೊಣ್ಣೆಯಿಂದ ಕಾರಿನ ಗಾಜಿಗೆ ಹೊಡೆದರೆಂದೂ, ಕಾರಿನ ಗಾಜಿಗೆ ಹಾನಿಯಾಗಿದೆಯೆಂದೂ ತಿಳಿದುಬಂದಿದೆ. ಈ ಸಂದರ್ಭ ಸ್ವಾಮೀಜಿಯವರು ಕಾರು ನಿಲ್ಲಿಸದೇ ಶಾಂತರಾಗಿ ಮುಂದುವರಿದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದರು

 

ಅರುಣ್ ಕುಮಾರ್ ಪುತ್ತಿಲ ಜೊತೆ ಬಿಜೆಪಿ ಮುಖಂಡರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ, ಪ್ರೇಮ್ ರಾಜ್ ಆರ್ಲಪದವು, ಕೃಷ್ಣಪ್ರಸಾದ್ ಶೆಟ್ಟಿ, ಕಿಶೋರ್ ಆರ್ಲಪದವು ಸಹಿತ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.