ಆಪರೇಷನ್ ಸಿಂಧೂರ್ ಬಳಿಕ ನಾಗರಿಕರ ಮೇಲೆ ಪಾಕ್ ದಾಳಿ; 10 ಮಂದಿ ಬಲಿ

  • 07 May 2025 01:52:51 PM


ಜಮ್ಮು ಕಾಶ್ಮೀರ: ಆಪರೇಷನ್ ಸಿಂಧೂರ ಧಾಳಿಗೆ ಕೋಪಗೊಂಡ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತವಾಗಿ ಗುಂಡು ಹಾರಿಸಿದ್ದು, ಇದರಲ್ಲಿ ಒಬ್ಬ ಮಹಿಳೆ ಹಾಗೂ ಇಬ್ಬರು ಮಕ್ಕಳು ಸೇರಿ 10 ಭಾರತೀಯ ನಾಗರಿಕರು ಸಾವನ್ನಪ್ಪಿದ್ದಾರೆ. 

 

ಈ ದಾಳಿಯಲ್ಲಿ 38 ಮಂದಿ ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

 

 ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ 'ಆಪರೇಷನ್ ಸಿಂಧೂರ್' ಅಡಿಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು.

 

 ಇದರಿಂದ ಕೋಪಗೊಂಡ ಪಾಕಿಸ್ತಾನ ಗಡಿಯ ಬಳಿ ಜನರ ಮೇಲೆ ಗುಂಡು ಹಾರಿಸಿ ಹಳ್ಳಿಗಳ ಮೇಲೆ ಮೋರ್ಟರ್ ಮತ್ತು ಶೆಲ್ ದಾಳಿಯು ಕೂಡ ನಡೆಸಲಾಗಿದೆ.

 

ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ 10 ಮಂದಿ ಮತ್ತು ರಾಜೌರಿ ಜಿಲ್ಲೆಯಲ್ಲಿ 3 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ 

 

ಭಾರತದ ಸೇನೆಯು ಕೂಡ ಪಾಕಿಸ್ತಾನಕ್ಕೆ ತಕ್ಕ ಪ್ರತಿಕ್ರಿಯೆ ನೀಡಿದ್ದು, ಪಾಕ್ ಸೈನ್ಯಕ್ಕೂ ಭಾರಿ ನಷ್ಟ ಉಂಟಾಗಿದೆ.

 

ಪರಿಸ್ಥಿತಿ ಗಂಭೀರ ಆಗಿರುವುದರಿಂದ ಜಮ್ಮು, ಸಾಂಬಾ, ಕಥುವಾ, ರಾಜೌರಿ ಮತ್ತು ಪೂಂಚ್ ಜಿಲ್ಲೆಯ ಎಲ್ಲಾ ಶಾಲಾ ಮತ್ತು ಕಾಲೇಜುಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.