ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಸೇನೆಗಳ ಮಧ್ಯೆ ನಡೆದ ಗುಂಡಿನ ಚಕಾಮಕಿಯಲ್ಲಿ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕಲ್ಲಿತಾಂಡ ಗ್ರಾಮದ ಯೋಧ ಮುರಳಿ ನಾಯ್ಕ್ ಅವರು ಹುತಾತ್ಮರಾಗಿದ್ದಾರೆ.
ಗಡಿಯಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಈ ಘಟನೆ ಸಂಭವಿಸಿದ್ದು, ಶೆಲ್ ದಾಳಿಗಳ ತೀವ್ರತೆಯೂ ಹೆಚ್ಚಾಗಿದೆ.
ಗುಂಡಿನ ಚಕಮಕಿಯ ವೇಳೆ ಮುರಳಿ ನಾಯ್ಕ್ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.
ದೇಶದ ರಕ್ಷಣೆಗೆ ತಮ್ಮ ಜೀವದ ಬಲಿ ನೀಡಿದ ಶೂರವೀರನ ಪಾರ್ಥಿವ ಶರೀರ ಮೇ 10ರಂದು ಅವರ ಸ್ವಗ್ರಾಮಕ್ಕೆ ತಲುಪಲಿದೆ. ಕುಟುಂಬ ಮತ್ತು ಗ್ರಾಮದಲ್ಲಿ ಭಾರಿ ದುಃಖದ ವಾತಾವರಣ ಸೃಷ್ಟಿಯಾಗಿದೆ.
ಗುರುವಾರ ರಾತ್ರಿ ಪಾಕಿಸ್ತಾನ ಸೇನೆ ಭಾರತೀಯ ಸೈನಿಕರ ವಿರುದ್ಧ ಗಡಿಯಲ್ಲಿ ದಾಳಿ ನಡೆಸಿದ ಸಂದರ್ಭದಲ್ಲಿ ಭಾರತೀಯ ಸೇನೆ ತಕ್ಷಣ ಪ್ರತಿದಾಳಿ ನಡೆಸಿ ತಿರುಗೇಟು ನೀಡಿತ್ತು.
ಈ ಸಂದರ್ಭದಲ್ಲಿ ಹುತಾತ್ಮರಾದ ಯೋಧ ಮುರಳಿ ನಾಯ್ಕ್ ಅವರ ತ್ಯಾಗವನ್ನು ಸ್ಮರಿಸಿಕೊಂಡು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ಸಂತಾಪವನ್ನು ಪ್ರಕಟಿಸಿದ್ದಾರೆ.