ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ರಾಜ್ಯಪಾಲರಿಗೆ ಬಿಜೆಪಿ ನಾಯಕರಿಂದ ಮನವಿ!

  • 09 May 2025 05:14:03 PM


ಬೆಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.)ಗೆ ಹಸ್ತಾಂತರಿಸುವಂತೆ ವಿನಂತಿಸಿ, ಭಾಜಪ ರಾಜ್ಯಾಧ್ಯಕ್ಷ ಶ್ರೀ ಬಿ. ವೈ. ವಿಜಯೇಂದ್ರ, ವಿಧಾನಸಭಾ ವಿಪಕ್ಷ ನಾಯಕ ಶ್ರೀ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಸಕರು ಮತ್ತು ಸಂಸದರ ನಿಯೋಗ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

 

ಈ ನಿಯೋಗದೊಂದಿಗೆ ಮೃತ ಸುಹಾಸ್ ಶೆಟ್ಟಿಯವರ ತಂದೆ-ತಾಯಿಗಳು ಕೂಡ ರಾಜಭವನಕ್ಕೆ ತೆರಳಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. 

 

 

ಪ್ರಕರಣದ ಸಂಪೂರ್ಣ ತನಿಖೆ ಎನ್‌ಐಎ ಮೂಲಕ ನಡೆಯಬೇಕು ಎಂಬುದು ಎಂಬುದು ಕುಟುಂಬದ ಹಾಗೂ ಸಾರ್ವಜನಿಕರ ಒತ್ತಾಯವಾಗಿದೆ.

 

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಶ್ರೀ ರಾಜೇಶ್ ನ್ಯಾಕ್ ಉಳಿಪ್ಪಾಡಿ, ಸುಹಾಸ್ ಶೆಟ್ಟಿಯವರ ಮಾವ ರಾಜೇಶ್ ಭಂಡಾರಿ (ಕಾವಳಮುಡೂರು) ಮತ್ತು ಗ್ರಾ.ಪಂ ಅಧ್ಯಕ್ಷರಾದ ಅಜಿತ್ ಶೆಟ್ಟಿಯವರು ಕುಟುಂಬದೊಂದಿಗೆ ಉಪಸ್ಥಿತರಿದ್ದರು.