ಕಾಸರಗೋಡು: ಚೆರುವತ್ತೂರು ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಸಂದರ್ಭದಲ್ಲಿ ಗುಡ್ಡ ಕುಸಿತ; ಮಣ್ಣಿನಡಿಗೆ ಸಿಲುಕಿ ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಸಾವು!

  • 12 May 2025 05:52:24 PM


ಕಾಸರಗೋಡು: ಕಾಸರಗೋಡು ಜಿಲ್ಲೆಯ ಚೆರುವತ್ತೂರಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತದ ಪರಿಣಾಮ ಓರ್ವ ಕಾರ್ಮಿಕ ಮಣ್ಣಿನಡಿಗೆ ಸಿಲುಕಿ ಮೃತಪಟ್ಟ ದುಃಖದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

 

ಘಟನೆಯ ಸಂದರ್ಭದಲ್ಲಿ ನಾಲ್ವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದರು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸರ ತಂಡವು ಅಪಾರ ಶ್ರಮ ಹಾಕಿ ನಾಲ್ವರೂ ಕಾರ್ಮಿಕರನ್ನು ಹೊರತೆಗೆಯಲಾಯಿತು.

 

ಆದರೆ ಅವರಲ್ಲಿ ಓರ್ವನು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.ಉಳಿದ ಮೂವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಚೆರ್ವತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.