ಉಡುಪಿ: ಮೇ 11ರಂದು ನಡೆದ ಅಸಾಧಾರಣ ಘಟನೆ ಎಲ್ಲರನ್ನು ಬೆಚ್ಚಿ ಬಿಳಿಸಿದೆ.
ಮದ್ಯಪಾನ ಮಾಡಿ ಅದರ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತಾನು ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿದ ಘಟನೆಯೊಂದು ಸಂಭವಿಸಿದೆ.
ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿ ಉಗ್ರವಾಗಿ ವರ್ತಿಸುತ್ತಿದ್ದ ಆತನೆದುರಾಗಿ, ಕುಟುಂಬದ ಸದಸ್ಯರು ಭಯಭೀತರಾಗಿ, ಪರಿಸ್ಥಿತಿಯನ್ನು ನಿಭಾಯಿಸಲಾಗದೆ ಅವರು ಸಹಾಯಕ್ಕಾಗಿ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು.
ಸಮಸ್ಯೆಗೆ ತಕ್ಷಣ ಸ್ಪಂದಿಸಿದ ನಅವರು ಸ್ಥಳಕ್ಕೆ ಧಾವಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವುದರಲ್ಲಿ ಯಶಸ್ವಿಯಾದರು.
ಅದರಿಂದಾಗಿ ಭಾರೀ ಪ್ರಮಾಣದ ಹಾನಿ ತಪ್ಪಿಸಿಕೊಂಡಂತಾಗಿದೆ.
ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಆ ವ್ಯಕ್ತಿಯನ್ನು ಸಮಾಧಾನಪಡಿಸಿ, ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸುವ ಕ್ರಮ ಕೈಗೊಂಡಿದ್ದಾರೆ.