ಪುತ್ತೂರು: ಕಬಕದಲ್ಲಿ ಮೊನ್ನೆ ನಡೆದ ಸರಕಾರಿ ಬಸ್ ಚಾಲಕನ ಬೇಜವಾಬ್ದಾರಿತನದಿಂದ ನಡೆದ ಅಪಘಾತದಲ್ಲಿ ಮರಣ ಹೊಂದಿದ ದಿವಂಗತ ಅರುಣ್ ಬೋರುಗುಡ್ಡೆಯವರ ಮನೆಗೆ ಇಂದು ನಮ್ಮ ಬಂಟ್ವಾಳ ತಾಲೂಕಿನ ಮಾನ್ಯ ಶಾಸಕರಾದ ಶ್ರೀ ರಾಜೇಶ್ ನ್ಯಾಕ್ ಉಳಿಪ್ಪಾಡಿ ಇವರು ಮನೆಗೆ ಭೇಟಿ ನೀಡಿ ಮೃತರ ಪತ್ನಿ ಹಾಗೂ ತಾಯಿ ಮತ್ತು ಮಗನಿಗೆ ಸಾಂತ್ವನ ನೀಡಿದರು.
ಈ ಸಂದರ್ಭದಲ್ಲಿ ಅವರು ಅರುಣ್ ಬೊರು ಗುಡ್ಡೆಯವರ ಮಗನ ಮುಂದಿನ ವಿದ್ಯಾಭ್ಯಾಸದ ಸಂಪೂರ್ಣ ಖರ್ಚನ್ನು ತಾನು ಭರಿಸುವುದಾಗಿ ತಿಳಿಸಿದ್ದಾರೆ.
ಮತ್ತು ಅಪಘಾತದಿಂದ ಸಿಗುವ ಪರಿಹಾರ ಧನವನ್ನು ಆದಷ್ಟು ಬೇಗ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಫೋನ್ ಮಾಡಿ ತಿಳಿಸಿದ್ದಾರೆ.