ಮಂಗಳೂರು: ಮಂಗಳೂರಿನ ಬಲ್ಮಠ ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ನರ್ಸಿಂಗ್ ಕಾಲೇಜು ಬಸ್ಸಿಗೆ ಹಿಂದಿನಿಂದ ಬಂದ ಇನ್ನೊಂದು ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ನಿನ್ನೆ ಮೇ ,17ರಂದು ಸಂಭವಿಸಿದೆ.
ಘಟನೆ ವೇಳೆ ಬಸ್ಸಿನಲ್ಲಿ ವಿದ್ಯಾರ್ಥಿಗಲು ಇದ್ದರು. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ನಿಂತಿದ್ದ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಕೆಲ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನವರು ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೇಗದ ಚಾಲನೆ ಮತ್ತು ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದೆನ್ನಲಾಗಿದೆ.