ಜಾರ್ಖಂಡ್: ಲತೇಹಾರ್ನಲ್ಲಿ ಶುಕ್ರವಾರ ರಾತ್ರಿ ನಡೆದ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಅತ್ಯಂತ ಅಪಾಯಕಾರಿ ಮತ್ತು ಬಹುಬೆಲೆ ನಕ್ಸಲ್ ನಾಯಕರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಪ್ಪು ಲೋಹರಾ ಮತ್ತಿಬ್ಬರು ಜನ ಮುಕ್ತಿ ಪರಿಷತ್ ಸಂಘಟನೆಯ ಪ್ರಮುಖ ನಕ್ಸಲ್ ರೂವಾರಿಗಳಾಗಿದ್ದು, ರಾಜ್ಯದ ವಿವಿಧ ನಕ್ಸಲ್ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರಹೊಂದಿದ್ದರು.
ಪಪ್ಪು ಲೋಹರಾ ಮಾಹಿತಿ ನೀಡಿದವರಿಗೆ ಜಾರ್ಖಂಡ್ ಪೊಲೀಸ್ ಇಲಾಖೆ ₹10 ಲಕ್ಷ ಬಹುಮಾನ ಘೋಷಿಸಿತ್ತು,
ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, 'ಮೋಸ್ಟ್ ವಾಂಟೆಡ್' ಲಿಸ್ಟ್ನಲ್ಲಿದ್ದರು.