ದೆಹಲಿ: ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದರು.
ಈ ದಾಳಿಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ ಸಂಘಟನೆ ನಡೆಸಿದೆಯೆಂದು ತನಿಖೆಯಿಂದ ತಿಳಿದು ಬಂದಿರುತ್ತದೆ.
ಈ ಘಟನೆಯ ನಂತರ ಭಾರತದಲ್ಲಿ ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿದ್ದು, ಇದೀಗ ಪಾಕಿಸ್ತಾನದ ಪ್ರಮುಖ ವ್ಯಕ್ತಿಗಳ ಮತ್ತು ಕ್ರಿಕೆಟ್ ಆಟಗಾರರ ಸೋಶಿಯಲ್ ಮೀಡಿಯಾ ಖಾತೆಗಳನ್ನು ಕೂಡ ನಿಷೇಧಿಸಿದೆ.
ಮೊದಲು ಪಾಕಿಸ್ತಾನ ಆಟಗಾರರ ಯೂಟ್ಯೂಬ್ ಚಾನೆಲ್ಗಳಿಗೆ ನಿರ್ಬಂಧ ಹೇರಲಾಗಿತ್ತು, ಆದರೆ ಇದೀಗ ಇನ್ಸ್ಟಾಗ್ರಾಮ್ ಖಾತೆಗಳಿಗೂ ನಿಷೇಧ ಹೇರಲಾಗಿದೆ.
ಬ್ಯಾನ್ಗೆ ಒಳಪಟ್ಟಿರುವವರು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಮೊಹಮ್ಮದ್ ರಿಜ್ವಾನ್, ಮಾಜಿ ನಾಯಕ ಬಾಬರ್ ಆಝಂ ಮತ್ತು ಶಾಹೀನ್ ಅಫ್ರಿದಿ ಆಗಿರುತ್ತಾರೆ. ಈ ಕ್ರಮವು ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ನಿಲುವು ಮತ್ತು ಭದ್ರತೆಗೆ ನೀಡಿರುವ ಪ್ರಾಮುಖ್ಯತೆಯನ್ನು ತೋರಿಸುತ್ತದೆ.