ಬೆಂಗಳೂರು: RCB ವಿಜಯೋತ್ಸವದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ11 ಮಂದಿ ಪ್ರಾಣ ಕಳೆದು ಕೊಂಡ ಹೃದಯ ದ್ರಾವಿಕ ಘಟನೆ ಮೊನ್ನೆ ಸಂಭವಿಸಿದೆ.
ಇದೀಗ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಮಂದಿ ಕುಟುಂಬಗಳಿಗೆ ₹10 ಲಕ್ಷ ಪರಿಹಾರವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಘೋಷಿಸಿದೆ.
ಈ ದುರ್ಘಟನೆಗೆ ಸರ್ಕಾರಿ ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣವೆಂಬ ಆರೋಪಗಳು ಕೇಳಿಬಂದಿದ್ದರೂ ಸರ್ಕಾರ ಈ ವಿಷಯದಲ್ಲಿ ಸ್ಪಷ್ಟನೆ ನೀಡಿಲ್ಲ. ಇದಕ್ಕೂ ಮುನ್ನ ರಾಜ್ಯ ಸರ್ಕಾರದಿಂದ ಪ್ರತಿ ಮೃತನ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಘೋಷಿಸಲಾಗಿತ್ತು. ಅಲ್ಲದೆ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ತಿಳಿಸಿತ್ತು.
ಈಗ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (KSCA) ಕೂಡ ₹5 ಲಕ್ಷ ಪರಿಹಾರ ಘೋಷಿಸಿದೆ.
ಇದಾದ ಬಳಿಕ RCB ಫ್ರಾಂಚೈಸಿ ಕೂಡ ಸಾವನ್ನಪ್ಪಿದವರ ಕುಟುಂಬಗಳಿಗೆ ಆರ್ಥಿಕ ಸಹಾಯದ ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು RCB ಅಭಿಮಾನಿಗಳ ಸಹಾಯಕ್ಕಾಗಿ ‘RCB ಕೇರ್ ನಿಧಿ’ ರಚನೆ ಮಾಡಿದೆ.